ಬಾಗಲಕೋಟೆ - ಬಾಗಲಕೋಟೆ ನಗರದ ಹೃದಯ ಭಾಗದಲ್ಲಿರುವ ಬಸವೇಶ್ವರ ವೃತ್ತದಲ್ಲಿ ಕೇಂದ್ರ ಸರ್ಕಾರದ ಬಜೆಟ್ ವಿರೋಧಿಸಿ ಬಾಗಲಕೋಟೆ ಜಿಲ್ಲಾ ಕಾಂಗ್ರೆಸ್ ಪಕ್ಷದ ವತಿಯಿಂದ ಬೃಹತ್ ಪ್ರತಿಭಟನೆ ನಡೆಸಿದರು ಬಾಗಲಕೋಟೆಯ ಶಾಸಕರಾದ ಎಚ್ ವೈ ಮೇಟಿ ಹಾಗೂ ಬಾಗಲಕೋಟೆ ಜಿಲ್ಲಾ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರಾದ ಎಸ್ ಜಿ ನಂಜಯ್ಯನಮಠ ವಿಧಾನ ಪರಿಷತ್ ಸದಸ್ಯ ಶ್ರೀಮತಿ ಉಮಾಶ್ರೀ ಬಾಗಲಕೋಟೆ ಮಹಿಳಾ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರಾದ ಶ್ರೀಮತಿ ರಕ್ಷಿತಾ ಈಟಿ ಮತ್ತು ಬಾಗಲಕೋಟೆ ಜಿಲ್ಲಾ ಪಂಚಾಯತ್ ಮಾಜಿ ಅಧ್ಯಕ್ಷರಾದ ಶ್ರೀಮತಿ ಬಾಯಕ್ಕ ಮೇಟಿ ಮಾತನಾಡಿದರು
ಕೇಂದ್ರ ಸರ್ಕಾರದ ಬಜೆಟ್ ವಿರುದ್ಧ ಖಾಲಿ ಚೆಂಬು ಪ್ರದರ್ಶಿಸಿ ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ ಕೂಗಿದರು ಹಾಗೂ ರೈತರು ನೇಕಾರರು ಕೂಲಿ ಕಾರ್ಮಿಕರು ದಿನಗೂಲಿ ನೌಕರರು ಮಧ್ಯಮ ವರ್ಗದವರು ಬಡವರನ್ನು ಈ ವರ್ಷದ ಕೇಂದ್ರ ಸರ್ಕಾರದ ಬಜೆಟ್ ನಲ್ಲಿ ಕಡೆಗಣಿಸಲಾಗಿದೆ ಎಂದು ಆರೋಪಿಸಿ ಪ್ರತಿಭಟನೆ ನಡೆಸಿದರು
ವಿವಿಧ ಸಮಿತಿಯ ಅಧ್ಯಕ್ಷರು , ಜಿಲ್ಲಾ ಘಟಕದ ಅಧ್ಯಕ್ಷರು , ಪದಾಧಿಕಾರಿಗಳು , ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಈ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು,
ವರದಿ ಶಂಕರ್ ವನಕಿ ಕಮತಗಿ ಬಾಗಲಕೋಟೆ