ಬಾಗಲಕೋಟೆ ಕ್ಷೇತ್ರ ಶಿಕ್ಷಣಾಧಿಕಾರಿಳ ಕಾರ್ಯಾಲಯದ FDA ಪ್ರಕಾಶ್ ಲೋಕಾಯುಕ್ತ ಬಲೆಗೆ

ನವನಗರದಲ್ಲಿರುವ ಬಾಗಲಕೋಟೆ ಕ್ಷೇತ್ರ ಶಿಕ್ಷಣಾಧಿಕಾರಿಳ ಕಚೇರಿಯ FDA ನೌಕರ ಪ್ರಕಾಶ ಅಂಗಡಿ ಎಂಬ ವ್ಯಕ್ತಿ ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತರ ಬಲೆಗೆ ಸಿಕ್ಕಿಬಿದ್ದಿದ್ದಾರೆ.

ಸದರಿ ವ್ಯಕ್ತಿಯು ಮಹಾದೇವಪ್ಪ ಸಣ್ಣದೇವರ ಎಂಬುವವರು ಸೇವಾ ನಿವೃತ್ತಿಯ ನಂತರ ಬಾಕಿ ಇರುವ ಗಳಿಕೆ ರಜೆ ನಗದೀಕರಣ ಮಾಡಿಕೊಡಲು 7000 ರೂ.ಗಳ ಬೇಡಿಕೆ ಇಟ್ಟಿದ್ದರು. 
ಸದರಿಯವರು ಸಲ್ಲಿಸಿದ ದೂರಿನ ಮೇರೆಗೆ ಲಂಚದ ಹಣ ಸ್ವೀಕರಿಸುತ್ತಿರುವಾಗ ದಾಳಿ ವೇಳೆ ಸಿಕ್ಕಿಬಿದ್ದಿದ್ದಾರೆ.

ಸದರಿ ದಾಳಿಯನ್ನು ಲೋಕಾಯುಕ್ತ ಪೊಲೀಸ್ ಅಧೀಕ್ಷಕ ಸತೀಶ ಚಿಟಗುಬ್ಬಿ ಮಾರ್ಗದರ್ಶನದಲ್ಲಿ ಹಾಗೂ ಪೊಲೀಸ್ ಉಪಾಧೀಕ್ಷ ಸಿದ್ದೇಶ್ವರ ನೇತೃತ್ವದಲ್ಲಿ ಪೊಲೀಸ್ ನಿರೀಕ್ಷಕ ಬಸವರಾಜ ಮುಕರ್ತಿಹಾಳ ಹಾಗೂ ಸಿಬ್ಬಂದಿಗಳಾದ ಬಸವರಾಜ ದೇಸಾಯಿ, ನಾಗಪ್ಪ ಪೂಜಾರಿ, ಭೀಮನಗೌಡ ಪಾಟೀಲ, ಶಂಕರ ಬಳಬಟ್ಟಿ, ಹನಮಂತ ಹಲಗತ್ತಿ, ಶಿವಾನಂದ ಮಮಟಗೇರಿ, ರಾಮನಗೌಡ ಗೌಡರ, ರಾಜನಾಳ, ಶಶಿಧರ ಬಾಚ್ಯಾಳ, ಮಹೇಶ ಹೊಡಗೌಡ್ರ ದಾಳಿಯಲ್ಲಿ ಪಾಲ್ಗೊಂಡಿದ್ದರು

ವರದಿ ಖಡಕ್ ಕನ್ನಡ Digital ಡೆಸ್ಕ್ ಬಾಗಲಕೋಟೆ

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!