ಬಾಗಲಕೋಟೆಯಲ್ಲಿ ಆಸ್ಪತ್ರೆಗಳು ಬಂದ್

 


ಬಾಗಲಕೋಟೆ : ಕೋಲ್ಕತ್ತಾದಲ್ಲಿ ಕಳೆದ ವಾರ ನಡೆದಿದ್ದ ವೈದ್ಯ ವಿದ್ಯಾರ್ಥಿನಿ ಅತ್ಯಾಚಾರ, ಕೊಲೆ ಪ್ರಕರಣವನ್ನು ಖಂಡಿಸಿ  

ಬಾಗಲಕೋಟೆ ಜಿಲ್ಲೆಯ ವೈದ್ಯರು, ವೈದ್ಯಕೀಯ ವಿದ್ಯಾರ್ಥಿಗಳು ಜಿಲ್ಲಾಡಳಿತ ಭವನದ ಎದುರು ಬೃಹತ್ ಪ್ರತಿಭಟನೆ ನಡೆಸಿದರು.


ಕೋಲ್ಕತ್ತಾದಲ್ಲಿ ವೈದ್ಯೆ ವಿದ್ಯಾರ್ಥಿನಿಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದಲ್ಲಿ ಪ್ರಮುಖ ಬೆಳವಣಿಗೆ ಸಂಭವಿಸಿದ್ದು, ಆಸ್ಪತ್ರೆಯ ಹಲವಾರು ತರಬೇತಿನಿರತ ವೈದ್ಯ ವಿದ್ಯಾರ್ಥಿಗಳು ಮತ್ತು ವೈದ್ಯರು ತಮ್ಮ ಮಗಳ ಸಾವಿಗೆ ಕಾರಣ ಎಂದು ಸಂತ್ರಸ್ತೆಯ ಪೋಷಕರು ಸಿಬಿಐಗೆ ಆರೋಪ ಸಲ್ಲಿಸಿದ್ದಾರೆ. ಅಂದರೆ, ಸಾಮೂಹಿಕ ಅತ್ಯಾಚಾರ ನಡೆದಿರುವ ಬಗ್ಗೆ ಅವರು ಶಂಕೆ ವ್ಯಕ್ತಪಡಿಸಿದ್ದಾರೆ 



ಇತ್ತ ಬಾಗಲಕೋಟೆ ಜಿಲ್ಲೆಯಲ್ಲೂ ಕೋಲ್ಕತ್ತಾ ವೈದ್ಯೆ ವಿದ್ಯಾರ್ಥಿನಿ ಪ್ರಕರಣ ತೀವ್ರ ಸ್ವರೂಪ ಪಡೆದಿದೆ. ದೇಶಾದ್ಯಂತ ವೈದ್ಯರು 24 ಗಂಟೆಗಳ ಕಾಲ ಚಿಕಿತ್ಸೆ ಬಹಿಷ್ಕರಿಸಿದ್ದಾರೆ. ಇಂದು ತುರ್ತು ಚಿಕಿತ್ಸೆ ಮಾತ್ರ ಲಭ್ಯವಿದೆ

ಬಾಗಲಕೋಟೆ ಗುಳೇದಗುಡ್ಡದಲ್ಲಿ ಕೂಡಾ ಬಂದ್ ಗೆ ಬೆಂಬಲ ನೀಡಿ ಒಂದು ದಿನದ ಚಿಕಿತ್ಸೆ ಬಹಿಷ್ಕಾರ ಮಾಡಲಾಗಿದೆ 



ವರದಿ - ರಾಜೀವ್ ಸುಂಕದ ಬಾಗಲಕೋಟೆ

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!