ಮಾಜಿ ಸಚಿವ ಎಚ್, ಎಂ. ರೇವಣ್ಣ ಬೇಟಿ ಮಾಡಿದ ರಾಜ್ಯ ದೇವಾಂಗ ಸಂಘ



 ಕರ್ನಾಟಕ ರಾಜ್ಯ ದೇವಾಂಗ ಸಂಘದ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು  ಮಾಜಿ ಸಚಿವರು ಹಾಗೂ ಕರ್ನಾಟಕ ಸರ್ಕಾರದ ಗ್ಯಾರಂಟಿ ಅನುಷ್ಠಾನ ಸಮಿತಿಯ ಅಧ್ಯಕ್ಷರಾದ  ಎಚ್, ಎಂ. ರೇವಣ್ಣ ಅವರ ಮನೆಗೆ ಭೇಟಿ ನೀಡಿದರು. 


ಕರ್ನಾಟಕ ರಾಜ್ಯ ದೇವಾಂಗ ಸಂಘದ ಪರವಾಗಿ ಅವರನ್ನು ಗೌರವಿಸಿ ಸನ್ಮಾನಿಸಲಾಯಿತು. ನಂತರ ಬೆಂಗಳೂರು ನಗರ ಜಿಲ್ಲೆಯ ವ್ಯಾಪ್ತಿಯಲ್ಲಿ ರಾಜ್ಯ ದೇವಾಂಗ ಸಂಘಕ್ಕೆ ಒಂದು ಬಿಡಿಎ ನಿವೇಶನವನ್ನು ಮಂಜೂರು ಮಾಡಲು ಶಿಫಾರಸು ಮಾಡಬೇಕೆಂದು ಮನವಿ ಸಲ್ಲಿಸಲಾಯಿತು.

 ಇದಕ್ಕೆ ಸಕಾರಾತ್ಮಕವಾಗಿ ಸ್ಪಂದಿಸಿದ  ಎಚ್. ಎಂ . ರೇವಣ್ಣ ಅವರು ಆದಷ್ಟು ಬೇಗ ಸಂಬಂಧಪಟ್ಟ ಅಧಿಕಾರಿಗಳ ಜೊತೆ ಮಾತನಾಡಿ ಬೆಂಗಳೂರಿನಲ್ಲಿ ಒಂದು ನಿವೇಶನವನ್ನು ತಮಗೆ ನೀಡಲು ಸೂಚಿಸುತ್ತೇನೆ ಎಂದು ಭರವಸೆ ನೀಡಿದರು. 


ಈ ಸಂದರ್ಭದಲ್ಲಿ ಕರ್ನಾಟಕ ರಾಜ್ಯ ದೇವಾಂಗ ಸಂಘದ ಅಧ್ಯಕ್ಷ  ರವೀಂದ್ರ ಪಿ. ಕಲ್ಬುರ್ಗಿ, ಉಪಾಧ್ಯಕ್ಷ ವಿರುಪಾಕ್ಷಪ್ಪ ಗೂಳಿ, ಪ್ರಧಾನ ಕಾರ್ಯದರ್ಶಿ ಟಿ. ರಾಜೇಶ, ಉಪಸ್ಥಿತರಿದ್ದರು 


ನಮ್ಮ ಪ್ರತಿನಿಧಿ - ಶಂಕರ ವನಕಿ ಕಮತಗಿ 

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!