ಶ್ರೀ ಅಯ್ಯಪ್ಪ ಸ್ವಾಮಿಗೆ ಮಹಾರುದ್ರಾಭಿಷೇಕ

 


ಬಾಗಲಕೋಟೆ ಜಿಲ್ಲೆಯ ಕಮತಗಿ ಪಟ್ಟಣದ ಶ್ರೀ ಅಯ್ಯಪ್ಪ ಸ್ವಾಮಿ ಸೇವಾ ಸಮಿತಿ ವತಿಯಿಂದ ಶ್ರೀ ಅಯ್ಯಪ್ಪ ಸ್ವಾಮಿಗೆ ಶ್ರಾವಣ ಮಾಸದ ನಿಮಿತ್ತ ಮಹಾ ರುದ್ರಾಭಿಷೇಕ ಮಾಡಲಾಯಿತು 

ಪಟ್ಟಣದ ಹೊರವಲಯದಲ್ಲಿರುವ ಮಹಾಂತೇಶ್ ಬ್ಯಾಳಿ ಅವರ ಪ್ಲಾಟಿನಲ್ಲಿರುವ ನಿಯೋಜಿತ ಅಯ್ಯಪ್ಪ ಸ್ವಾಮಿ ದೇವಸ್ಥಾನದಲ್ಲಿ ಮಹಾ ರುದ್ರಾಭಿಷೇಕ ಮತ್ತು ಮಹಾಪ್ರಸಾದವನ್ನು ಏರ್ಪಡಿಸಲಾಗಿತ್ತು 

ಇದೆ ವೇಳೆ ಅಯ್ಯಪ್ಪ ಸ್ವಾಮಿ ಸೇವಾ ಸಮಿತಿ ವತಿಯಿಂದ ಕಮತಗಿ ಪಟ್ಟಣ ಪಂಚಾಯತಿಗೆ ನೂತನ ಅಧ್ಯಕ್ಷರಾಗಿ ಆಯ್ಕೆಯಾದ ರಮೇಶ್ ಜಮಖಂಡಿ ಹಾಗೂ ಪಟ್ಟಣ ಪಂಚಾಯತ್ ಸದಸ್ಯರಾದ ದೇವಿಪ್ರಸಾದ ನಿಂಬಲಗುಂದಿ ಮತ್ತು ಇತರ ಗಣ್ಯಮಾನ್ಯರಿಗೆ ಸನ್ಮಾನಿಸಿ ಗೌರವಿಸಲಾಯಿತು 

ಶ್ರೀ ಕಲ್ಲಯ್ಯ ಧಾರವಾಡ ಅವರಿಂದ ಶ್ರೀ ಅಯ್ಯಪ್ಪಸ್ವಾಮೀಗೆ ಮಹಾ ರುದ್ರಾಭಿಷೇಕ ಮತ್ತು ಪೂಜಾ ಕಾರ್ಯಕ್ರಮ ಜರುಗಿತು 

 ಖ್ಯಾತ ಜ್ಯೋತಿಷಿಗಳಾದ ಡಾ. ಗಣೇಶ ಚಿತ್ರಗಾರ, ಬಸವರಾಜ ಡೋಣೂರ. ಹಾಗೂ ಪಟ್ಟಣದ ಎಲ್ಲ ಶ್ರೀ ಅಯ್ಯಪ್ಪ ಸ್ವಾಮಿ ಸೇವಾಸಕ್ತರು ಈ ಪೂಜಾ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು


 🖊️ ವರದಿ ಶಂಕರ್ ವನಕಿ ಕಮತಗಿ

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!