ಕೈ ವಶವಾದ ಕೆರೂರ ಪಟ್ಟಣ
ಬಾಗಲಕೋಟೆ ಜಿಲ್ಲೆಯ ಬಾದಾಮಿ ತಾಲೂಕಿನ ಕೆರೂರು ಪಟ್ಟಣ ಪಂಚಾಯತ ಸಭಾಭವನದಲ್ಲಿ ನಡೆದ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಚುನಾವಣೆ ಪ್ರಕ್ರಿಯೆಯಲ್ಲಿ
ಕಾಂಗ್ರೆಸ್ ಪಕ್ಷದ ಪ್ರತಿನಿಧಿಯಾದ ಶ್ರೀಮತಿ ನಿರ್ಮಲಾ ಮದಿ ಅವರು ಹಾಗೂ ಉಪಾಧ್ಯಕ್ಷರಾಗಿ, ಮೋದಿನಸಾಬ್ ಚಿಕ್ಕೂರ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಯಾಗಿ ವಿಜಯಶಾಲಿಯಾದರು
ಇಂದು ಅವರನ್ನು, ಕೆರೂರ ಪಟ್ಟಣ ಪಂಚಾಯತ ಸಭಾಭವನದಲ್ಲಿ ಬಾದಾಮಿ ವಿಧಾನಸಭಾ ಕ್ಷೇತ್ರದ ಜನಪ್ರಿಯ ಶಾಸಕರಾದ ಶ್ರೀ ಭೀಮಸೇನ ಚಿಮ್ಮನಕಟ್ಟಿ ಅವರು ಶುಭ ಹಾರೈಸಿ ಸನ್ಮಾನಿಸಿದರು
ಅಧ್ಯಕ್ಷ ಉಪಾಧ್ಯಕ್ಷರ ಸ್ಥಾನಕ್ಕೆ ಚುನಾವಣೆ ಮುಗಿದ ನಂತರ ಕಾರ್ಯಕರ್ತರು ಮತ್ತು ಮುಖಂಡರು ಅಭಿಮಾನಿಗಳು ಪರಸ್ಪರ ಗುಲಾಲು ಎರಚಿ ಪಟಾಕಿ ಸಿಡಿಸಿ ಸಂಭ್ರಮಿಸಿದರು
ಬಾದಾಮಿ ತಹಶೀಲ್ದಾರ್ ಮುಖ್ಯ ಚುನಾವಣಾ ಅಧಿಕಾರಿಗಳಾಗಿ ಜೆ.ಬಿ.ಮಜ್ಜಗಿ ಕಾರ್ಯ ನಿರ್ವಹಿಸಿದರು ಪಟ್ಟಣ ಪಂಚಾಯತ ಮುಖ್ಯಾಧಿಕಾರಿ ರಮೇಶ್ ಮಾಡಬಾಳ ಹಾಗೂ ಪೋಲೀಸ್ ಸಿಬ್ಬಂದಿಗಳು ಇದ್ದರು
ನಮ್ಮ ಪ್ರತಿನಿಧಿ - ಸಂತೋಷ ಕಲಾಲಬಂಡಿ ಗುಳೇದಗುಡ್ಡ