ನಾಳೆ ದಿ.5 ರಂದು ಬೆಳಿಗ್ಗೆ 10 ಗಂಟೆಗೆ ನಗರದ ಡಾ.ಬಿ.ಆರ್.ಅಂಬೇಡ್ಕರ್ ಸರ್ಕಲ್ ದಿಂದ ಪ್ರತಿಭಟನಾ ಮೆರವಣಿಗೆ ಆರಂಭಗೊಂಡು ವೆಂಕಟಪೇಠ,ವಲ್ಲಭಬಾಯಿ ಚೌಕ, ಎಂ.ಜಿ.ರಸ್ತೆ ಮೂಲಕ ಬಸವೇಶ್ವರ ವೃತ್ತ ತಲುಪಿ ನಂತರ ಸಮಾವೇಶ ನಡೆಯಲಿದೆ.
ಪ್ರತಿಭಟನಾ ಸಮಾವೇಶದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಆರ್.ಬಿ.ತಿಮ್ಮಾಪುರ, ಶಾಸಕರಾದ ಎಚ್.ವಾಯ್. ಮೇಟಿ, ವಿಜಯಾನಂದ ಕಾಶಪ್ಪನವರ, ಭೀಮಸೇನ ಚಿಮ್ಮನಕಟ್ಟಿ, ವಿಧಾನ ಪರಿಷತ್ ಸದಸ್ಯೆ ಶ್ರೀಮತಿ ಉಮಾಶ್ರೀ, ಜಿಲ್ಲಾಧ್ಯಕ್ಷರಾದ ಎಸ್.ಜಿ. ನಂಜಯ್ಯನಮಠ, ಮಾಜಿ ಶಾಸಕರಾದ ಆನಂದ ನ್ಯಾಮಗೌಡ, ಮುಖಂಡರಾದ ಸಿದ್ದು ಕೊಣ್ಣೂರ, ಸಂಯುಕ್ತ ಪಾಟೀಲ, ಕೆಪಿಸಿಸಿ ಪದಾಧಿಕಾರಿಗಳು, ಜಿಲ್ಲೆಯ ಎಲ್ಲ ಮತಕ್ಷೇತ್ರದ ಮುಖಂಡರು, ಚುನಾಯಿತ ಸದಸ್ಯರು ಪಾಲ್ಗೊಳ್ಳುವರು. ಜಿಲ್ಲೆಯ ಎಲ್ಲ ಕಾಂಗ್ರೆಸ ಪಕ್ಷದ ಕಾರ್ಯಕರ್ತರು ಸಿದ್ದರಾಮಯ್ಯನವರ ಅಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವ ಮೂಲಕ ಸಮಾವೇಶ ಯಶಸ್ವಿಗೊಳಿಸಬೇಕೆಂದು ಪ್ರಚಾರ ಸಮಿತಿಯ ಜಿಲ್ಲಾಧ್ಯಕ್ಷರಾದ ನಾಗರಾಜ ಹದ್ಲಿ ಪ್ರಕಟಣೆಯ ಮೂಲಕ ವಿನಂತಿಸಿದ್ದಾರೆ
ವರದಿ ಶಂಕರ್ ವನಕಿ ಬಾಗಲಕೋಟೆ