ಭಾರತೀಯ ಜನತಾ ಪಾರ್ಟಿ ಸಿಎಂ ಸಿದ್ದರಾಮಯ್ಯ ಅವರ ತೇಜೋವಧೆ ಮಾಡುತ್ತಿದೆ ಎಂದು ಆರೋಪಿಸಿ ಬಾಗಲಕೋಟೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಬೃಹತ್ ಪ್ರತಿಭಟನೆ ನಡೆಸಿದರು
ನಗರದ ಬಾಬಾಸಾಹೇಬ್ ಅಂಬೇಡ್ಕರ್ ವೃತ್ತದಿಂದ ಆರಂಭಗೊಂಡ ಮೆರವಣಿಗೆ ವೆಂಕಟಪೇಟೆ ವಲ್ಲಭಾಯಿ ಚೌಕ್ ಎಂ ಜಿ ರಸ್ತೆಯ ಮೂಲಕ ಬಸವೇಶ್ವರ ಸರ್ಕಲ್ ತಲುಪಿತು
ನಂತರ ಹೊಳೆ ಆಂಜನೇಯ ದೇವಸ್ಥಾನದ ಹತ್ತಿರ ಬೃಹತ್ ಪ್ರತಿಭಟನಾ ಸಮಾವೇಶ ನಡೆಯಿತು
ಜಿಲ್ಲಾ ಉಸ್ತುವಾರಿ ಸಚಿವ ಆರ್ ಬಿ ತಿಮ್ಮಾಪುರ ಮಾತನಾಡಿ ಸಿಎಂ ಸಿದ್ದರಾಮಯ್ಯ ಅವರ ಜನಪರ ಯೋಜನೆಗಳನ್ನ ನೋಡಿ ಸಹಿಸಿಕೊಳ್ಳಲಾಗದ ಬಿಜೆಪಿಯವರು ವೃತ ಸಿದ್ದರಾಮಯ್ಯನವರ ಮೇಲೆ ಈ ರೀತಿ ಆರೋಪ ಮಾಡುತ್ತಿದ್ದಾರೆ ಬಡವರ ಶ್ರಮಿಕರ ಹಾಗೂ ಎಲ್ಲ ವರ್ಗದ ಜನರಿಗೆ ವಿವಿಧ ರೀತಿಯ ಯೋಜನೆಗಳನ್ನು ರೂಪಿಸಿದ ನಾಯಕ ಅವರ ಕೆಲಸ ನೋಡಿ ಇವರಿಗೆ ಸಹಿಸಿಕೊಡಲಾಗುತ್ತಿಲ್ಲ ಎಂದರು
ಈ ಪ್ರತಿಭಟನಾ ಮೆರವಣಿಗೆಯಲ್ಲಿ ಶಾಸಕರಾದ ಎಚ್ ವೈ ಮೇಟಿ ಭೀಮಸೇನ್ ಚಿಮ್ಮನಕಟ್ಟಿ ವಿಜಯಾನಂದ ಕಾಶಪ್ಪನವರ್ ವಿಶ್ರಾಂತ ಕುಲಪತಿ ಮಲ್ಲಿಕಾ ಘಂಟಿ ವೀಣಾ ಕಾಶಪ್ಪನವರ್ ರಕ್ಷಿತಾ ಈಟಿ ಸೇರಿದಂತೆ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಮತ್ತು ವಿವಿಧ ಘಟಕದ ಅಧ್ಯಕ್ಷರು ಪದಾಧಿಕಾರಿಗಳು ಪಾಲ್ಗೊಂಡಿದ್ದರು
ವರದಿ - ರಾಜು ಸುಂಕದ ಬಾಗಲಕೋಟೆ