ರಾಜ್ಯದಲ್ಲಿನ "ಭ್ರಷ್ಟ ಕಾಂಗ್ರೆಸ್ ಸರ್ಕಾರದ ವಿರುದ್ಧ ಐತಿಹಾಸಿಕ ಹೋರಾಟ ಕೈಗೊಂಡಿರುವ ಬಿಜೆಪಿ-ಜೆಡಿಎಸ್ ಎರಡು ಪಕ್ಷಗಳ ನೇತೃತ್ವದ "ಮೈಸೂರು ಚಲೋ ಪಾದಯಾತ್ರೆ"ಯು ಇಂದು 5 ನೇ ದಿನಕ್ಕೆ ಕಾಲಿಟ್ಟಿದೆ.
ಈ ಭ್ರಷ್ಟ ಕಾಂಗ್ರೆಸ್ ಸರ್ಕಾರದ ಹಗರಣಗಳ ವಿರುದ್ಧ ನಡೆಯುತ್ತಿರುವ ಮೈಸೂರು ಚಲೋ ಪಾದಯಾತ್ರೆಗೆ ರಾಜ್ಯದಿಂದ ಅಪಾರ ಸಂಖ್ಯೆಯಲ್ಲಿ ಕಾರ್ಯಕರ್ತರು ಪಾಲ್ಗೊಂಡಿದ್ದು, ಈ ಮೈಸೂರು ಚಲೋ ಪಾದಯಾತ್ರೆಯನ್ನು ಬೆಂಬಲಿಸಲು ಬಾಗಲಕೋಟೆ ಜಿಲ್ಲೆಯಿಂದ ಆಗಮಿಸುತ್ತಿರುವ ಐವತ್ತಕ್ಕೂ ಹೆಚ್ಚು ಪಕ್ಷದ ಹಿರಿಯ ಹಾಗೂ ಕಿರಿಯ ಕಾರ್ಯಕರ್ತರ ಪ್ರಯಾಣ ಸುಖಕರವಾಗಿರಲಿ ಆಶಿಸಿ,
ಈ ಪಾದಯಾತ್ರೆಯಿಂದ ರಾಜ್ಯದಲ್ಲಿ ಭ್ರಷ್ಟ ಕಾಂಗ್ರೆಸ್ ಸರ್ಕಾರ ತೊಲಗಲಿ ಎಂದು ಹೋರಾಡೋಣ ಎಂದು MLC P,H. ಪೂಜಾರ್ ಕಾರ್ಯಕರ್ತರಿಗೆ ಕರೆ ನೀಡಿದರು
ವರದಿ - ರಾಜೀವ್ ಸುಂಕದ ಬಾಗಲಕೋಟೆ