ಬಾಗಲಕೋಟೆ ಜಿಲ್ಲೆಯ ಕಮತಗಿ ಪಟ್ಟಣದ ಶ್ರೀ ದೇವಾಂಗ ಸಮಾಜ ಅಭಿವೃದ್ಧಿ ಸಮಿತಿ ವತಿಯಿಂದ ನೂತನವಾಗಿ ಕಮತಗಿ ಪಟ್ಟಣ ಪಂಚಾಯತ ಅಧ್ಯಕ್ಷ ಉಪಾಧ್ಯಕ್ಷರಿಗೆ ಗೌರವ ಸನ್ಮಾನ ಕಾರ್ಯಕ್ರಮ ನಡೆಯಿತು
ನೂತನವಾಗಿ ಅಧ್ಯಕ್ಷರಾಗಿ ಆಯ್ಕೆಯಾದ ರಮೇಶ್ ಜಮಖಂಡಿ ಹಾಗೂ ಉಪಾಧ್ಯಕ್ಷೆಯಾಗಿ ಆಯ್ಕೆಯಾದ ಶ್ರೀಮತಿ ನೇತ್ರಾವತಿ ದೇವಿಪ್ರಸಾದ್ ನಿಂಬಲಗುಂದಿ ಅವರಿಗೆ ಸನ್ಮಾನಿಸಿ ಗೌರವಿಸಲಾಯಿತು
ಈ ಸರಳ ಸಮಾರಂಭದ ಘನ ಉಪಸ್ಥಿತಿಯನ್ನು ಶ್ರೀ ಬನಶಂಕರಿ ದೇವಸ್ಥಾನದ ಮುಖ್ಯ ಅರ್ಚಕರಾದ ಶ್ರೀ ರಾಘವೇಂದ್ರಸ್ವಾಮಿ ದೇವಾಂಗಮಠ ವಹಿಸಿದ್ದರು ಕಾರ್ಯಕ್ರಮದ ಅಧ್ಯಕ್ಷತೆಯನ್ನು ದೇವಾಂಗ ಸಮಾಜದ ಅಧ್ಯಕ್ಷ ಪಾಂಡುರಂಗ ಹೋಟಿ ಮುಖ್ಯ ಅತಿಥಿಗಳಾಗಿ ಪಟ್ಟಣ ಪಂಚಾಯತ ಸದಸ್ಯರಾದ ಬಸವರಾಜ ಕುಂಬಳಾವತಿ, ಪ್ರಕಾಶ್ ಶಿನ್ನೂರ, ಬಸವರಾಜ ದಂಡಾವತಿ, ಕರ್ನಾಟಕ ರಾಜ್ಯ ದೇವಾಂಗ ಸಂಘದ ನಿರ್ದೇಶಕರಾದ ಗೋಪಾಲಪ್ಪ ವನಕಿ, ಪಟ್ಟಣ ಪಂಚಾಯತ ಸದಸ್ಯರಾದ ದೇವಿಪ್ರಸಾದ ನಿಂಬಲಗುಂದಿ, ಸೇರಿದಂತೆ ದೇವಾಂಗ ಸಮಾಜದ ಹಿರಿಯರು ಯುವಕರು ಶ್ರೀ ದೇವಾಂಗ ಸಮಾಜ ಅಭಿವೃದ್ಧಿ ಸಮಿತಿಯ ಎಲ್ಲಾ ಪದಾಧಿಕಾರಿಗಳು ಸಮಾರಂಭದಲ್ಲಿ ಪಾಲ್ಗೊಂಡಿದ್ದರು
ಕಾರ್ಯಕ್ರಮವನ್ನು ಶಿಕ್ಷಕ ರಾಮು ಕುಣಿಬೆಂಚಿ ನಿರೂಪಿಸಿ ವಂದಿಸಿದರು
ನಮ್ಮ ಪ್ರತಿನಿಧಿ - ಶಂಕರ್ ವನಕಿ ಕಮತಗಿ