20 ಜನ ಸಂತ್ರಸ್ತರಿಗೆ ಹಕ್ಕು ಪತ್ರ ವಿತರಣೆ

 

ಬಾಗಲಕೋಟೆ ವಿಧಾನಸಭಾ ಕ್ಷೇತ್ರದ ಜನಪ್ರಿಯ ಶಾಸಕರಾದ ಹಾಗೂ ಬಿ.ಟಿ.ಡಿ.ಎ ಅದ್ಯಕ್ಷರಾದ ಎಚ್.ವಾಯ್.ಮೇಟಿ ಶುಕ್ರವಾರ 20 ಜನ ಸಂತ್ರಸ್ತರಿಗೆ ಹಕ್ಕು ಪತ್ರ ವಿತರಣೆ ಮಾಡಿದರು.

ಬಾಗಲಕೋಟೆಯ ನವನಗರದಲ್ಲಿರುವ ಬಿಟಿಡಿಎ ಸಭಾಭವನದಲ್ಲಿ ಸಂತ್ರಸ್ತರಿಗೆ ಹಕ್ಕುಪತ್ರ ವಿತರಿಸಿ ಮಾತನಾಡಿದ ಅವರು ಆಲಮಟ್ಟಿ ಜಲಾಶಯದ ಹಿನ್ನೀರಿನಿಂದ ಮುಳುಗಡೆಗೊಂಡ ನಿವಾಸಿಗಳಿಗೆ ಪುನರ ವಸತಿ ಮತ್ತು ಪುನರ್‌ ನಿರ್ಮಾಣಕ್ಕೆ ಬಿಟಿಡಿಎ ಕಟಿಬದ್ದವಾಗಿದೆ . 

ಮೂಲ ಸಂತ್ರಸ್ತರಿಗೆ ಮತ್ತು ಬಾಡಿಗೆದಾರಿಗೆ ಹಕ್ಕು ಪತ್ರ ನೀಡುವ ಮೂಲಕ ಹಂತ ಹಂತವಾಗಿ ಪ್ರತಿ ತಿಂಗಳು ಅರ್ಹ ಸಂತ್ರಸ್ತರಿಗೆ ಹಕ್ಕು ಪತ್ರ ವಿತರಿಸಲಾಗುವುದೆಂದು ಹೇಳಿದರು.

ಈ ಸಂದರ್ಭದಲ್ಲಿ ಮುಖ್ಯ ಅಭಿಯಂತರರಾದ ಬಸವರಾಜ, ಕಾರ್ಯನಿರ್ವಾಹಕರಾದ ಪ್ರಶಾಂತ ಬಾರಿಗಿಡದ ಅಭಿಯಂತರ ವಿಜಯಶಂಕರ ಹೆಬ್ಬಳ್ಳಿ,ಎಸ್. ಎಸ್. ಡೊಳ್ಳಿ,ಪುನರ್ವಸತಿ ಅಧಿಕಾರಿ ಉಪಸ್ಥಿತರಿದ್ದರು.


ನಮ್ಮ ಪ್ರತಿನಿಧಿ - ರಾಜೀವ್ ಸುಂಕದ ಬಾಗಲಕೋಟೆ 

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!