ಬಾಗಲಕೋಟೆ ಜಿಲ್ಲೆಯ ಹುನಗುಂದ ತಾಲೂಕಿನ ಮೂಗನೂರು ಗ್ರಾಮ ಪಂಚಾಯಿತ ವ್ಯಾಪ್ತಿಯಲ್ಲಿ ಇಂದು ಬಿಜೆಪಿ ಸದಸ್ಯತ್ವ ಅಭಿಯಾನಕ್ಕೆ ಚಾಲನೆ ನೀಡಿ, ಪಕ್ಷವನ್ನು ಹೆಚ್ಚಿನ ಮಟ್ಟದಲ್ಲಿ ಬೆಂಬಲಿಸಲು ಕಾರ್ಯಕರ್ತರಲ್ಲಿ ವಿಧಾನ ಪರಿಷತ್ ಸದಸ್ಯ ಪಿ ಎಚ್ ಪೂಜಾರ ಮನವಿ ಮಾಡಿದರು
ಮೂಗನೂರು, ಬಸವನಾಳ, ಬೂದಿಹಾಳ ಎಸ್ ಕೆ ಗ್ರಾಮದಲ್ಲಿ ನಡೆದ ಬಿಜೆಪಿ ಸದಸ್ಯತ್ವ ಅಭಿಯಾನದ ಪ್ರಯುಕ್ತ ನೂರಾರು ಜನರು ಪಕ್ಷದ ಸದಸ್ಯರಾದರು. ಮನೆ ಮನೆಗೆ ತೆರಳಿ ಬಿಜೆಪಿಯ ಸ್ಟಿಕರ್ ಹಾಗೂ ಮಾಹಿತಿ ಪುಸ್ತಕ ಪ್ರದರ್ಶಿಸಿ, ಸದಸ್ಯತ್ವ ಕುರಿತು ಮಾಹಿತಿ ನೀಡಲಾಯಿತು. ಜನರು ಬಿಜೆಪಿ ಸದಸ್ಯರಾಗಲು ಅಪಾರ ಉತ್ಸುಕತೆ ತೋರಿಸುತ್ತಿದ್ದಾರೆ. ರಾಷ್ಟ್ರ ಹಾಗೂ ರಾಜ್ಯದ ಹಿತಕ್ಕಾಗಿ ಬಿಜೆಪಿ ಸದಸ್ಯತ್ವವನ್ನು ನೋಂದಾಯಿಸಿ ಎಂದು ನರೇಂದ್ರ ಮೋದಿ ಅವರ ಆಡಳಿತ ವೈಖರಿಯನ್ನು ಕೊಂಡಾಡಿದರು.
ಕೇಂದ್ರ ಸರಕಾರದ ರೈತರ ಹಿತಗೋಸ್ಕರ ಸಾಕಷ್ಟು ಕೆಲಸ ಮಾಡುತ್ತಿದ್ದು, ದೇಶದ ಭದ್ರತೆಗೆ ಕಟ್ಟಿಬದ್ಧರಾಗಿ ನಿಂತಿರುವ ಸೈನಿಕರಿಗೆ ಶಕ್ತಿ ತುಂಬುತ್ತಿರುವುದು ಶ್ರೀ ನರೇಂದ್ರ ಮೋದಿಯವರು ಎಂದು ಹೆಮ್ಮೆಯಿಂದ ಹೇಳಿದರು.
ರಾಜ್ಯ ಸರ್ಕಾರ ಆಡಳಿತದಲ್ಲಿ ವೈಫಲ್ಯವಾಗಿದ್ದು ಭ್ರಷ್ಟಾಚಾರದಲ್ಲಿ ಮುಳುಗಿದೆ ಜನರು ಹಿಡಿ ಶಾಪ ಹಾಕುತ್ತಿದ್ದಾರೆ,
ಈ ಅಭಿಯಾನದಲ್ಲಿ ಭಾಗಿಯಾಗಿದ್ದ ಕಾರ್ಯಕರ್ತರನ್ನು ಸದಸ್ಯತ್ವ ಮೂಲಕ ನೋಂದಾಯಿಸಿಕೊಳ್ಳಲಾಯಿತು. ಈ ಸಂದರ್ಭದಲ್ಲಿ ಸ್ಥಳೀಯ ಹಾಗೂ ಗ್ರಾಮದ ಅನೇಕ ಕಾರ್ಯಕರ್ತರು ಬೆಂಬಲ ವ್ಯಕ್ತಪಡಿಸಿದರು. ಎಂದು ವಿಧಾನ ಪರಿಷತ್ ಸದಸ್ಯ ಪಿ ಎಚ್ ಪೂಜಾರ ಹೇಳಿದರು
ವರದಿ ಶಂಕರ್ ವನಕಿ ಕಮತಗಿ