ಬಾಗಲಕೋಟೆಯಲ್ಲಿ ಸಿಎಂ ಸಿದ್ದರಾಯ್ಯ ರಾಜಿನಾಮೆ ಆಗ್ರಹಿಸಿ ಭಾರತೀಯ ಜನತಾ ಪಾರ್ಟಿ ಜಿಲ್ಲಾ ಘಟಕ ದಿಂದ ನಗರದ ಬಸವೇಶ್ವರ ವೃತ್ತದಲ್ಲಿ ಬೃಹತ್ ಪ್ರತಿಭಟನೆಯಲ್ಲಿ ಶಾಸಕರಾದ ಮಹೇಶ ತೆಂಗಿನಕಾಯಿ, ಸಿ ಎಂ ಸಿದ್ದರಾಮಯ್ಯ ಮೂಡಾ ಹಗರಣದ ನೈತಿಕ ಹೊಣೆ ಹೊತ್ತು ಕೂಡಲೇ ರಾಜೀನಾಮೆ ನೀಡಬೇಕು ಎಂದು ಹೇಳಿದರು
ಮಾಜಿ ಶಾಸಕ ಡಾ. ವೀರಣ್ಣ ಚರಂತಿಮಠ ಮಾತನಾಡಿ ಸಿಎಂ ಸಿದ್ದರಾಮಯ್ಯ ಹಾಗೂ ಇಡೀ ಕಾಂಗ್ರೆಸ್ ಶಾಸಕರು ಈ ಹಗರಣದಲ್ಲಿ ಭಾಗಿಯಾಗಿದ್ದು ಅವರು ರಾಜೀನಾಮೆ ನೀಡುವವರೆಗೂ ನಮ್ಮ ಹೋರಾಟ ಮುಂದುವರೆಯಲಿದೆ ಎಂದು ಹೇಳಿದರು
ಬಿಜಿಪಿ ಜಿಲ್ಲಾಧ್ಯಕ್ಷ ಶಾಂತಗೌಡ ಪಾಟೀಲ ಬಿಜೆಪಿ ಮುಖಂಡರಾದ ಜಿ.ಎನ್.ಪಾಟೀಲ. ಡಾ.ಎಂ.ಎಸ್.ದಡ್ಡೆನ್ನವರ. ಲಕ್ಷ್ಮೀ ನಾರಾಯಣ ಕಾಸಟ ನಗರಸಭೆ ಅಧ್ಯಕ್ಷೆ ಸವಿತಾ ಲೆಂಕೆನ್ನವರ, ಜ್ಯೋತಿ ಭಜಂತ್ರಿ, ಶಶಿಕಲಾ ಮಜ್ಜಗಿ, ಸುರೇಶ ಕೊಣ್ಣೂರ, ಬಸವರಾಜ ಹುನಗುಂದ,ಶಿವಾನಂದ ಟವಳಿ, ಸತ್ಯನಾರಾಯಣ ಹೆಮಾದ್ರಿ, ರಾಜು ಮುದೇನೂರ, ಮುತ್ತಣ್ಣ ಬೆಣ್ಣೂರ, ಸೇರಿಂದತೆ ಅನೇಕರು ಭಾಗವಹಿಸಿದ್ದರು.
ವರದಿ ರಾಜೀವ್ ಸುಂಕದ ಬಾಗಲಕೋಟೆ