ನಿದ್ದೆ ಮಂಪರಿನಲ್ಲಿ ಕ್ಯಾಂಟರ್​ಗೆ ಕಾರು ಡಿಕ್ಕಿ, ಸ್ಥಳದಲ್ಲೇ ನಾಲ್ವರ ಮರಣ

 


ಬಾಗಲಕೋಟೆ ಜಿಲ್ಲೆಯ ಹುನಗುಂದ ತಾಲೂಕಿನ ಧನ್ನೂರು ಗ್ರಾಮದ ಟೋಲ್ ಬಳಿ ತಡರಾತ್ರಿ  ರಸ್ತೆ ಅಪಘಾತ ಸಂಭವಿಸಿದೆ.


      ಕ್ಯಾಂಟರ್​ ವಾಹನಕ್ಕೆ ಕಾರೊಂದು ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. 


ನಿದ್ದೆ ಮಂಪರಿನಲ್ಲಿದ್ದ ಕಾರು ಚಾಲಕ ಕ್ಯಾಂಟರ್​ಗೆ ಡಿಕ್ಕಿ ಹೊಡೆದ ಪರಿಣಾಮ ಅಪಘಾತ ಸಂಭವಿಸಿದೆ. ಅಪಘಾತದಲ್ಲಿ ಲಕ್ಷ್ಮಣ ವಡ್ಡರ್(55), ಬೈಲಪ್ಪ ಬಿರಾದಾರ್(45), ರಾಮಣ್ಣ ನಾಯಕ(50), ಚಾಲಕ ರಫಿಕ್ ಮುಲ್ಲಾ(25) ಎಂಬ  ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ಎನ್ನಲಾಗುತ್ತಿದೆ 

 

ಮೃತರನ್ನು ವಿಜಯಪುರ ಜಿಲ್ಲೆಯ ಬಿದರಕುಂದಿ ಗ್ರಾಮದ ನಿವಾಸಿಗಳು ಎಂದು ತಿಳಿದು ಬಂದಿದೆ ಮೃತರು ವಿಜಯನಗರ ಜಿಲ್ಲೆಯ ಹುಲಿಗೆಮ್ಮ ದೇವಿಯ ದರ್ಶನ ಪಡೆದು ಮರಳಿ ಗ್ರಾಮಕ್ಕೆ ದನ್ನೂರು ಮುದ್ದೇಬಿಹಾಳ ಮೂಲಕ ತಮ್ಮ ಊರಿಗೆ  ತೆರಳುತ್ತಿದ್ದರು ಕ್ಯಾಂಟರ್​ ಮುದ್ದೇಬಿಹಾಳದಿಂದ ಹುನಗುಂದ ಕಡೆ ತೆರಳಿತ್ತು. 

ನಿದ್ದೆ ಮಂಪರಿನಿಂದ ಕ್ಯಾಂಟರ್​ಗೆ ಕಾರು ಡಿಕ್ಕಿಯಾಗಿ ದುರ್ಘಟನೆ ಸಂಭವಿಸಿದೆ.

 ಕ್ಯಾಂಟರ್​ಗೆ ಡಿಕ್ಕಿ ಹೊಡೆದ ರಭಸಕ್ಕೆ ಕಾರು ನಜ್ಜುಗುಜ್ಜಾಗಿದೆ. ಸ್ಥಳಕ್ಕೆ ಹುನಗುಂದ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ 


ವರದಿ ಶಂಕರ ವನಕಿ ಕಮತಗಿ

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!