ಬಾಗಲಕೋಟೆ ಜಿಲ್ಲೆಯ ಬಾದಾಮಿ ತಾಲೂಕಿನ ಆಡಗಲ್ಲ ಗ್ರಾಮದಲ್ಲಿ ರಾಜ್ಯ ಸರ್ಕಾರದ ಅಕ್ಷರ ದಾಸೋಹದ ಮದ್ಯಾಹ್ನ ಉಪಹಾರ ಯೋಜನೆಯ ಅಜೀಂ ಪ್ರೇಮ್ ಜಿ ಪೌಂಡೇಷನ್, ಬೆಂಗಳೂರು ಇವರ ಸಹಭಾಗಿತ್ವದಲ್ಲಿ ಶಾಲಾ ಮಕ್ಕಳ ಪೌಷ್ಟಿಕತೆ ವೃದ್ಧಿಸಲು ಹಾಗೂ ಸರಕಾರಿ ಶಾಲೆಗಳ ವಾರದಲ್ಲಿ 6 ದಿನಗಳು ಪೋರಕ ಪೌಷ್ಟಿಕ ಆಹಾರವನ್ನು ಉಚಿತವಾಗಿ ನೀಡುವುದು ಹಾಗೂ ಸರಕಾರಿ ಪ್ರೌಢಶಾಲೆಯಲ್ಲಿ ನೂತನ ಸ್ಮಾರ್ಟ್ ಕ್ಲಾಸ್ ಉದ್ಘಾಟನೆಯನ್ನು ಜನಪ್ರಿಯ ಶಾಸಕರಾದ ಶ್ರೀ ಭೀಮಸೇನ ಬಿ ಚಿಮ್ಮನಕಟ್ಟಿ ಅವರು ಅಧ್ಯಕ್ಷತೆಯಲ್ಲಿ ಕಾರ್ಯಕ್ರಮ ಉದ್ಘಾಟನೆಗೊಂಡಿತು
ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿ ಮಕ್ಕಳಿಗೆ ಪೌಷ್ಟಿಕ ಆಹಾರ ಅತಿ ಮುಖ್ಯವಾದು ಪೌಷ್ಟಿಕ ಆಹಾರವನ್ನು ಸರಕಾರ ನೀಡುತ್ತಿರುವುದನ್ನು ಮಕ್ಕಳು ಇದರ ಪ್ರಯೋಜನ ಪಡೆದು ಕೊಳ್ಳಬೇಕು ಎಂದು ಹೇಳಿದರು
ಈ ಸಂದರ್ಭದಲ್ಲಿ ಗ್ರಾಮದ ಹಿರಿಯರು ಗ್ರಾಮ ಪಂಚಾಯತ ಅಧ್ಯಕ್ಷರು ಸದಸ್ಯರು, ಶಾಲಾ ಎಸ್ ಡಿ ಎಂ ಸಿ ಅಧ್ಯಕ್ಷರು ಸದಸ್ಯರು ಮುಖಂಡರು, ಉಪಸ್ಥಿತರಿದ್ದರು.
ವರದಿ - ಸಂತೋಷ ಕಲಾಲಬಂಡಿ ಗುಳೇದಗುಡ್ಡ